ಮೂಡುಬಿದಿರೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ
Update: 2022-04-27 10:26 GMT
ಮೂಡುಬಿದಿರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಗೆ ಆಗಮಿಸಿದರು.
ಹೆಲಿಪ್ಯಾಡ್ ನಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಸ್ವಾಗತಿಸಿದರು.
ಸಿಎಂ ಬೊಮ್ಮಾಯಿ ಅವರು ಇಂದು ಮಂಗಳೂರಿನಲ್ಲಿ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿತ್ತು. ಇದೀಗ ಸಿಎಂ ಅವರು ಮೂಡುಬಿದಿರೆಗೆ ಆಗಮಿಸಿದ್ದಾರೆ.