'ಸಿದ್ದರಾಮಯ್ಯ ಮುಂದಿನ ಸಿಎಂ': ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರಿಂದ ಘೋಷಣೆ

Update: 2022-04-27 14:24 GMT
ಸಿದ್ದರಾಮಯ್ಯ   | ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು, ಎ.27: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಬೆಂಬಲಿಗರು ಬಾಸ್ ಬಾಸ್, ಸಿದ್ದು ಬಾಸ್, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.  

ಬುಧವಾರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ವಿಧಾನಸಭಾ ಕ್ಷೇತ್ರ ಪುಲಿಕೇಶಿನಗರಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಬಡವರಿಗೆ ದವಸ ಧಾನ್ಯ ಹಂಚುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅಖಂಡ ಅವರ ಬೆಂಬಲಿಗರು, ಮಂದಿನ ಸಿಎಂ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು. 

ಕಾಂಗ್ರೆಸ್‍ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರ ಪದೇ ಪದೇ ಸದ್ದು ಮಾಡುತ್ತಿದ್ದು, ಬುಧವಾರ ಅಖಂಡ ಅವರ ಬೆಂಬಲಿಗರು ಬಾಸ್ ಬಾಸ್ ಸಿದ್ದು ಬಾಸ್, ಮುಂದಿನ ಸಿಎಂ ಸಿದ್ದರಾಮಯ್ಯನವರಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News