ನನ್ನ ವಿರುದ್ಧದ ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾಗಿದೆ: ಶಾಸಕ ಝಮೀರ್ ಅಹ್ಮದ್ ಸ್ಪಷ್ಟನೆ

Update: 2022-04-29 15:08 GMT

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಸಂಬಂಧ ಇಲ್ಲ ಎಂದು  ಶಾಸಕ ಝಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. 

''ಕಳೆದ 17 ನೇ ತಾರೀಖಿನಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮಕ್ಕಾಗೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ. ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು' ಎಂದು  ಶಾಸಕ ಝಮೀರ್ ಅಹ್ಮದ್ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾಗಿ ಬಂಧಿತರಾಗಿದ್ದ ಆರೋಪಿಗಳ ಕುಟುಂಬಕ್ಕೆ ಫುಡ್ ಕಿಟ್ ಹಾಗೂ ಧನ ಸಹಾಯ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದ್ದಾರೆ ಎಂಬ ಆರೋಪ ಜಮೀರ್‌ ವಿರುದ್ಧ ಕೇಳಿಬಂದಿತ್ತು.

ಈ ವಿಚಾರಕ್ಕೆ ಸಂಬಂಧಿಸಿ  ಸಚಿವ ಡಾ. ಅಶ್ವತ್ಥ ನಾರಾಯಣ, ಸೇರಿದಂತೆ ಹಲವು ಬಿಜೆಪಿ ಮುಖಂಡರು ಟೀಕಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News