ಹುಬ್ಬಳ್ಳಿ ದಾಂಧಲೆ ಪ್ರಕರಣ: ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ

Update: 2022-04-30 15:50 GMT

ಹುಬ್ಬಳ್ಳಿ, ಎ.30: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮಹ್ಮದ್ ಆರೀಫ್ ಗುರುವಾರ ತಡರಾತ್ರಿ ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಗಲಭೆ ಪ್ರಕರಣ ಸಂಬಂಧ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿದ್ದ ಆರೀಫ್, ಅಲ್ಲಿದ್ದ ಸಿಬ್ಬಂದಿಗೆ ಟರ್ಪಂಟೈನ್ ನೀಡುವಂತೆ ವಿನಂತಿಸಿದ್ದಾನೆ. ಗಾಯಕ್ಕೆ ಹಚ್ಚಲು ಕೇಳಿರಬಹುದು ಎಂದು ಸಿಬ್ಬಂದಿ ಅದರ ಬಾಟಲ್ ನೀಡಿದ್ದಾರೆ. ಅದನ್ನು ಪಡೆದ ಮಹ್ಮದ್ ಆರೀಫ್ ತಕ್ಷಣ ಕುಡಿದಿದ್ದಾನೆ. ಅಲ್ಲಿಯೇ ಇದ್ದ ಮತ್ತೊಬ್ಬ ಆರೋಪಿ ಮಹಾನಗರ ಪಾಲಿಕೆಯ ಎಐಎಂಐಎಂ ಸದಸ್ಯ ನಸೀರ್ ಅಹ್ಮದ್ ಹೊನ್ಯಾಳ ಅದನ್ನು ನೋಡಿ ಬಾಟಲಿ ಕಿತ್ತುಕೊಂಡಿದ್ದಾರೆ ಎನ್ನಲಾಗಿದೆ.

ತಕ್ಷಣ ಮಹ್ಮದ್ ಆರೀಫ್‍ನನ್ನು ಕಿಮ್ಸ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆತ ಚೇತರಿಸಿಕೊಂಡಿದ್ದಾನೆ ಎಂದು ಪೆÇಲೀಸರು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News