ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2022-04-30 16:04 GMT

ಬೈಂದೂರು : ಗ್ಯಾಸ್ಟ್ರಿಕ್ ತೊಂದರೆಯಿಂದ ಬಳಲುತ್ತಿದ್ದ ಯಡ್ತರೆ ಗ್ರಾಮದ ನವೀನ್ ನಿಲಯ ನಿವಾಸಿ ಶ್ರೀಲತಾ (36) ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಎ.29ರಂದು ಸಂಜೆ ಮನೆಯ ರೂಮ್‌ನ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಸಾಂತ್ಯಾರು ಬೆದ್ರ ಹಿಂಡ್ಲು ನಿವಾಸಿ ಅಪ್ಪಿ ಹಾಂಡ್ತಿ ಎಂಬವರು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡ ಎ.30ರಂದು ಬೆಳಗ್ಗೆ ಮನೆಯ ಪಡಸಾಲೆಯ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News