ರಾಜ್ಯದಲ್ಲಿ ರವಿವಾರ 104 ಹೊಸ ಕೋವಿಡ್ ಪ್ರಕರಣಗಳು ದೃಢ: ಸಚಿವ ಸುಧಾಕರ್

Update: 2022-05-02 06:33 GMT

ಬೆಂಗಳೂರು: ರಾಜ್ಯದಲ್ಲಿ ರವಿವಾರ 104 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,780ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.  

ಈ ಕುರಿತು ಕೂ ಮಾಡಿರುವ ಸಚಿವ ಸುಧಾಕರ್, 'ಈ ಅವಧಿಯಲ್ಲಿ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿದ್ದಾರೆ. 108 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು,  10,566 ಕೋವಿಡ್ ಟೆಸ್ಟ್ ನಡೆಸಲಾಗಿದೆ' ಎಂದು ಹೇಳಿದ್ದಾರೆ. 

'ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 0.98ರಷ್ಟಿದ್ದು,  ಬೆಂಗಳೂರು ನಗರದಲ್ಲಿ  93 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,701 ಇದೆ' ಎಂದು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News