ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಸಂತ್ರಸ್ತೆಗೆ ಚರ್ಮ ಜೋಡಣೆ ಚಿಕಿತ್ಸೆ

Update: 2022-05-02 14:35 GMT
photo- pti 

ಬೆಂಗಳೂರು, ಮೇ 2: ಇಲ್ಲಿನ ಸುಂಕದಕಟ್ಟೆಯಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಸಂತ್ರಸ್ತೆಗೆ ಸೋಮವಾರದಿಂದ ಚರ್ಮ ಜೋಡಣೆ ಚಿಕಿತ್ಸೆ ಮುಂದುವರೆಸಿದ್ದಾರೆ.

ನಗರದ ಮಡಿವಾಳದಲ್ಲಿರುವ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಸಂತ್ರಸ್ತೆ ಯುವತಿಗೆ ನುರಿತ ವೈದ್ಯರ ತಂಡದಿಂದ ಸುಟ್ಟ ಭಾಗಕ್ಕೆ ಚರ್ಮ ಜೋಡಣೆ ಮಾಡುತ್ತಿದ್ದಾರೆ. 

ಸೋಮವಾರ ವೈದ್ಯರು ಬೆಳಗ್ಗೆ ಈ ಶಸ್ತ್ರಚಿಕಿತ್ಸೆ ಕೈಗೊಂಡಿದ್ದಾರೆ. ಆಕೆಯ ಸ್ಥಿತಿ ಸಹಜವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿದ ಯುವತಿಯ ಸಂಬಂಧಿ ಸುಂದರೇಶ್, ಆರೋಪಿ ನಾಗೇಶ್‍ಗೆ ಕಠಿಣ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದರು.
ಶಂಕೆ: ಆರೋಪಿ ಹೊರ ರಾಜ್ಯಗಳಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದೇವಸ್ಥಾನ, ಮಠಗಳಿಗೆ ಸೇರಿರುವ ಬಗ್ಗೆ ಅನುಮಾನ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದು, ಈಗಾಗಲೇ ಕರಪತ್ರಗಳನ್ನು ಹಂಚಿ ಶೋಧ ನಡೆಸಲಾಗುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News