ಈದ್ ಉಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ಕೆ.ಗೋಪಾಲಯ್ಯ ಭಾಗಿ: ಶುಭ ಹಾರೈಕೆ

Update: 2022-05-03 05:28 GMT

ಬೆಂಗಳೂರು, ಮೇ 3: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರ ಮುಸ್ಲಿಮ್ ಬಾಂಧವರು ಪವಿತ್ರ ರಮಝಾನ್ ಹಬ್ಬವನ್ನು ಶ್ರದ್ದೆ ಭಕ್ತಿಯಿಂದ ಆಚರಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮಂಗಳವಾರ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ ಇಲಾಹಿ- ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಭಾಗವಹಿಸಿ ಮುಸ್ಲಿಮ್ ಬಾಂಧವರಿಗೆ ಶುಭ ಕೋರಿದರು.

ಇಲಾಹಿ ಈದ್ಗಾ ಚಾರಿಟಬಲ್ ಟ್ರಸ್ಟ್ ನಿಂದ ಆಯೋಜಿಸಿದ್ದ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಕಂಠೀರವ ನಗರ, ನಂಜುಂಡೇಶ್ವರ ನಗರ, ವಿಜಯಾನಂದ ನಗರ, ಕೃಷ್ಣಾನಂದ ನಗರದ ಸಾವಿರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ನೆ.ಲ.ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಮಹದೇವ್, ರಾಜೇಂದ್ರ ಕುಮಾರ್, ಮುಸ್ಲಿಂ ಸಮಾಜದ ಮುಖಂಡರಾದ ಸಾದಿಕ್, ಖರೀಬುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಾಮೂಹಿಕ ಪ್ರಾರ್ಥನೆ ನಂತರ ಸಮಾಜ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News