×
Ad

ಅಡ್ಯಾರ್ ಕಣ್ಣೂರು | ಕಾರು-ಕಂಟೈನರ್ ನಡುವೆ ಢಿಕ್ಕಿ: ಓರ್ವ ಮೃತ್ಯು, ಇಬ್ಬರಿಗೆ ಗಾಯ

Update: 2022-05-05 10:01 IST
ಸಾಂದರ್ಭಿಕ ಚಿತ್ರ

ಮಂಗಳೂರು, ಮೇ 5: ನಗರ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ.

ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಇಬ್ರಾಹೀಂ(32) ಮೃತಪಟ್ಟ ಕಾರು‌ ಚಾಲಕ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು‌ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮೂವರು ಕಾರಿನಲ್ಲಿ ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ತೆರಳುತ್ತಿದ್ದರು. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿ‌ದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಕಾರು ಚಲಾಯಿಸುತ್ತಿದ್ದ ಇಬ್ರಾಹೀಂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News