ಸಿದ್ದರಾಮಯ್ಯ ಕಾಂಗ್ರೆಸ್ ನಿಂದ ಸಸ್ಪೆಂಡ್ ಆಗಲಿದ್ದಾರೆ: ಸಚಿವ ಮುನಿರತ್ನ
Update: 2022-05-05 10:29 GMT
ಬೆಂಗಳೂರು: 'ಈ ಹಿಂದೆ ರಾಮಕೃಷ್ಣ ಹೆಗಡೆಯವರಿಗೆ ಆಗಿದ್ದ ಸ್ಥಿತಿಯೇ ಸಿದ್ದರಾಮಯ್ಯ ಅವರಿಗೆ ಆಗುತ್ತಿದೆ. 2023ರ ಒಳಗೆ ಸಿದ್ದರಾಮಯ್ಯರನ್ನು ಕಾಂಗ್ರೆಸ್ನಿಂದ ಹೊರಹಾಕುತ್ತಾರೆ' ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸಿಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಹೋಗಿರುವುದೇ ಅದೇ ಕಾರಣಕ್ಕೆ. ಸಿದ್ದರಾಮಯ್ಯನನ್ನು 2023ಕ್ಕೆ ಪಾರ್ಟಿಯಿಂದಲೇ ಸಸ್ಪೆಂಡ್ ಮಾಡಿಸುತ್ತಾರೆ ನೋಡಿ' ಎಂದರು.
'ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್ ಯಾವುದೇ ಆಧಾರವಿಲ್ಲದೆ ಆರೋಪ ಮಾಡ್ತಿದೆ. ಸಿದ್ದರಾಮಯ್ಯ ಹೇಳಿದರೆ ರಾಜ್ಯ ಸೂಕ್ಷ್ಮವಾಗಿ ಗಮನಿಸುತ್ತದೆ. ಅಂತಹ ಹಿರಿಯರು ದಾಖಲೆ ಆಮೇಲೆ ಕೊಡ್ತೇವೆ ಅಂತಾರೆ. ಅಶ್ವತ್ಥ್ ನಾರಾಯಣ್ಗೂ ಇದಕ್ಕೂ ಸಂಬಂಧವಿಲ್ಲ' ಎಂದು ಮುನಿರತ್ನ ಸ್ಪಷ್ಟಪಡಿಸಿದರು.