ಕೊಳ್ಳೇಗಾಲ | ಕಾರು ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2022-05-05 12:04 GMT

ಕೊಳ್ಳೇಗಾಲ. ಮೇ.5 . ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕೆಂಪನಪಾಳ್ಯ ಗ್ರಾಮದ ನಾಗಸುಂದರಪ್ಪ ಎಂಬುವವರ ಪುತ್ರ ಮನೋಜ್(24) ಮೃತ್ತ ದುರ್ದೈವಿ ಎಂದು ತಿಳಿದು ಬಂದಿದೆ. 

ಕಳೆದ ಮೂರು ದಿನಗಳ ರಜೆಯನ್ನು ಮುಗಿಸಿ ಊರಿನಿಂದ  ಬೆಂಗಳೂರಿಗೆ ಹೋಗುವಾಗ ಎದುರಗಡೆಯಿಂದ ಬಂದ ಅತಿವೇಗವಾಗಿ ಬಂದ  ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News