ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರನ್ನು ನಾವೇ ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದೇವೆ: ಸಚಿವ ಶ್ರೀರಾಮುಲು

Update: 2022-05-05 14:41 GMT

ಭಟ್ಕಳ: ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರನ್ನು ನಾವೇ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಸಾರಿಗೆ ಹಾಗೂ ಪ.ಪಂ. ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಅವರು ಗುರುವಾರ ಭಟ್ಕಳ ತಾಲೂಕಿನ ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ನಾವೇ ಪತ್ತೆಹಚ್ಚಿ ಅವರ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿದ್ದೇವೆ. ಬೇರೆ ಯಾವುದೋ ಪಕ್ಷ ನಮಗೆ ಅಕ್ರಮದ ಬಗ್ಗೆ ತಿಳಿಸಿ ನಾವು ಕ್ರಮ ಕೈಗೊಳ್ಳದಿದ್ದರೆ ತಪ್ಪಾಗುತ್ತೆ ಆದರೆ ನಾವು ತಪ್ಪಿತಸ್ಥರನ್ನು ಶಿಕ್ಷಿಸುವಲ್ಲಿ ಗಮನ ಹರಿಸುತ್ತಿದ್ದೇವೆ ಎಂದರು.

ಹೊನ್ನಾವರದ ನೂತನ ಬಸ್ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ  ಸಚಿವ ಶ್ರೀರಾಮುಲು ಮುರುಡೇಶ್ವರಕ್ಕೆ ಭೇಟಿ ನೀಡಿದರು.

ಮುರುಡೇಶ್ವರ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಶಾಲು ಹಾಕಿ ಗೌರವಿಸಲಾಯಿತು. 
ಈ ಸಂದರ್ಭದಲ್ಲಿ ಶಾಸಕ ಸುನಿಲ ನಾಯ್ಕ, ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್, ತಹಶೀಲ್ದಾರ್ ಸುಮತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News