ಕೆಲಸದಿಂದ ವಜಾಗೊಂಡಿದ್ದ ಬಿಎಂಟಿಸಿ ನೌಕರ ಆತ್ಮಹತ್ಯೆ

Update: 2022-05-05 15:12 GMT
ವಿನೋದ್ ಕುಮಾರ್ ಪತ್ರಿ-  ಆತ್ಮಹತ್ಯೆ ಮಾಡಿಕೊಂಡ ನೌಕರ

ಬೆಂಗಳೂರು, ಮೇ 5: ಬಿಎಂಟಿಸಿಯಲ್ಲಿ ಕೆಲಸ ಕಳೆದುಕೊಂಡಿದ್ದಕ್ಕೆ ಮನನೊಂದು ನೌಕರ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ.

ಬಿಎಂಟಿಸಿ ನೌಕರನಾಗಿದ್ದ ವಿನೋದ್ ಕುಮಾರ್ ಪತ್ರಿ(42) ಎಂಬುವರು ಹುಟ್ಟೂರು ಲಿಂಗಸುಗೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಬಿಎಂಟಿಸಿಯಲ್ಲಿ ಚಾಲಕ ಹಾಗೂ ನಿರ್ವಾಹಕನಾಗಿದ್ದ ವಿನೋದ್ ಕಳೆದ ವರ್ಷ ನೌಕರಿಯಿಂದ ವಜಾಗೊಂಡ ಹಿನ್ನೆಲೆ ಖಿನ್ನತೆಗೆ ಒಳಗಾಗಿದ್ದರು. 

ಅವರನ್ನು ಈ ಹಿಂದೆ ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕೆ ಕಳೆದ ಮಾರ್ಚ್‍ನಲ್ಲಿ ವಜಾಗೊಳಿಸಲಾಗಿತ್ತು. ಮರಳಿ ಕೆಲಸ ಸಿಗದ ಹಿನ್ನೆಲೆ ಮನನೊಂದಿದ್ದ ಅವರು ಗುರುವಾರ ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ. 

ಘಟನೆ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News