×
Ad

ಕೋವಿಡ್ ಸಾವಿನ ಸುಳ್ಳು ಲೆಕ್ಕ ಹೇಳಿದ ಮೋದಿ ಸರ್ಕಾರಕ್ಕೆ ಸತ್ತವರ ಮನೆಯ ಶಾಪ ತಟ್ಟದೇ ಇರದು: ದಿನೇಶ್ ಗುಂಡೂ ರಾವ್

Update: 2022-05-06 11:02 IST

ಬೆಂಗಳೂರು: 'ಕೋವಿಡ್ ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರೆಚಿದ್ದ ಕೇಂದ್ರದ ಸುಳ್ಳಿನ ಬಂಡವಾಳ WHO ವರದಿಯಿಂದ ಬಯಲಾಗಿದೆ. ಕೋವಿಡ್‌ಗೆ 2020-21 ರಲ್ಲಿ ಭಾರತವೊಂದರಲ್ಲೇ 47 ಲಕ್ಷ ಜನ ಮೃತಪಟ್ಟಿದ್ದಾರೆ‌. ಆದರೆ ವಿಶ್ವದ ಮುಂದೆ ಮಾನ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಸತ್ತವರ ಸಂಖ್ಯೆ ಕೇವಲ 4.80 ಲಕ್ಷ ಎಂದು ಜನರ ದಾರಿ ತಪ್ಪಿಸಿತ್ತು' ಎಂದು ಕಾಂಗ್ರೆಸ್ ನಾಯಕ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  2ನೇ ಅಲೆಯಲ್ಲಿ ಭಾರತ ಸಾವಿನ ಮನೆಯಾಗಿತ್ತು. ಗಂಗೆಯಲ್ಲಿ ಶವಗಳು ತೇಲಿದ್ದವು, ಆಕ್ಸಿಜನ್ ಇಲ್ಲದೆ ಸಾಲು ಸಾಲು ಹೆಣಗಳು ಬಿದ್ದವು. ಜನ ದೀಪದ ಹುಳುಗಳಂತೆ ಸಾಯುತ್ತಿದ್ದರೂ ಮೋದಿಯವರು ದೇಶ ಕೊರೋನಾ ಗೆದ್ದಿದೆ ಎಂದು ಬಿಟ್ಟಿ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಈ ಮೂಲಕ ಸಾವಿನ ಲೆಕ್ಕದ ಸತ್ಯ ಮರೆಮಾಚಿದ್ದರು. ಈಗ WHO ವರದಿ ಸರ್ಕಾರದ ಸತ್ಯ ದರ್ಶನ ಮಾಡಿಸಿದೆ ಎಂದು ತಿಳಿಸದರು.

ಕೋವಿಡ್ ಸಾವಿನ ಸುಳ್ಳು ಲೆಕ್ಕ ಹೇಳಿದ ಮೋದಿ ಸರ್ಕಾರಕ್ಕೆ ಸತ್ತವರ ಮನೆಯ ಶಾಪ ತಟ್ಟದೇ ಇರದು. ಸುಳ್ಳು ಹೇಳಿ ಸತ್ಯವನ್ನು ಬಹಳ ದಿನ ಅದುಮಿಡಲು ಸಾಧ್ಯವಿಲ್ಲ ಎಂಬುದು WHO ವರದಿಯಿಂದ ಸಾಬೀತಾಗಿದೆ. ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ,ಮೋದಿಯವರ ಬಿಟ್ಟಿ ಪ್ರಚಾರದ ಹುಚ್ಚಿನಿಂದ 47 ಲಕ್ಷ ಜನರು ಸಾಯುವಂತಾಯಿತು. ಈ ಸಾವುಗಳಿಗೆ ಕೇಂದ್ರವೇ ನೇರ ಹೊಣೆ ಎಂದು ಕಿಡಿಗಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News