×
Ad

1971ರ ಯುದ್ಧವು ಇಡೀ ಸರಕಾರದ ಕಾರ್ಯವಿಧಾನಕ್ಕೆ ಉತ್ತಮ ನಿದರ್ಶನ: ರಾಜನಾಥ್ ಸಿಂಗ್

Update: 2022-05-06 11:42 IST

ಹೊಸದಿಲ್ಲಿ: 1971ರ ಯುದ್ಧವು ಸಶಸ್ತ್ರ ಪಡೆಗಳಿಗೆ ಮಾತ್ರವಲ್ಲದೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಇಡೀ ಸರಕಾರದ ಕಾರ್ಯ ವಿಧಾನಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಪಿ.ಸಿ. ಲಾಲ್ ಸ್ಮಾರಕ ಉಪನ್ಯಾಸದಲ್ಲಿ ತಮ್ಮ ಭಾಷಣದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, "1971 ರ ಯುದ್ಧವು ಸಶಸ್ತ್ರ ಪಡೆಗಳಿಗೆ ಮಾತ್ರವಲ್ಲದೆ ರಾಷ್ಟ್ರೀಯ ಭದ್ರತೆಗಾಗಿಯೂ ಇಡೀ ಸರಕಾರದ ನೀತಿಗೆ ಅತ್ಯುತ್ತಮ ಉದಾಹರಣೆಯಾಗಿದೆ" ಎಂದು ಹೇಳಿದರು.

ಸಶಸ್ತ್ರ ಪಡೆಗಳ ಏಕೀಕರಣಕ್ಕಾಗಿ ನಡೆಯುತ್ತಿರುವ ಪ್ರಕ್ರಿಯೆಯು ನಮ್ಮ ಸಂಯೋಜಿತ ಸಾಮರ್ಥ್ಯವನ್ನು ಮಾತ್ರವಲ್ಲದೆ ನಮ್ಮ ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News