×
Ad

ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-05-06 19:14 IST

ಬೆಂಗಳೂರು, ಮೇ 06: ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.  

ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಎಲ್ಲಾ ಭಾಗದಿಂದಲೂ  ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ  ಬರುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ  ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು  ಒಲವು ತೋರುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಎಸ್.ಟಿ. ಜಯರಾಂ ಮಾತ್ರ ಅಲ್ಲದೆ ಯಾರು ನಮ್ಮ ಪಕ್ಷದ ಬಗ್ಗೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಒಲವು ತೋರಿಸಿದ್ದಾರೆಯೋ ಅವರೆಲ್ಲ ಬಳಿ ಮಾತನಾಡಲಾಗುವುದು ಎಂದರು.

90ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಆರೋಗ್ಯವಂತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಅವರ ಮಾರ್ಗದರ್ಶನ ಸರ್ಕಾರ ಮತ್ತು ರಾಜ್ಯದ ಜನತೆಗೆ ದೊರೆಯುವಂತಾಗಲಿ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News