ಮಂಡ್ಯ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2022-05-06 15:35 GMT
ಕುಮಾರ್- ಆತ್ಮಹತ್ಯೆ ಮಾಡಿಕೊಂಡ ರೈತ

ಪಾಂಡವಪುರ, ಮೇ 6: ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ದಿವಂಗತ ಯಳವೇಗೌಡ ಅವರ ಪುತ್ರ ರೈತ ಕುಮಾರ್ ಎಂಬುವರು ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿದ್ದ ಹಿಪ್ಪೆ ಮರಕ್ಕೆ ಬುಧವಾರ ತಡರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ರೈತ ಕುಮಾರ್ 1.10 ಎಕರೆ ಖುಷ್ಕಿ ಜಮೀನು ಹೊಂದಿದ್ದು, ತರಕಾರಿ ಬೆಳೆದಿದ್ದರು. ಕೆ.ಬೆಟ್ಟಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 50 ಸಾವಿರ ರೂ. ಕೆ.ಬೆಟ್ಟಹಳ್ಳಿ ಡಿಸಿಸಿ ಬ್ಯಾಂಕ್‍ನಲ್ಲಿ ಚಿನ್ನಾಭರಣಗಳನ್ನು ಅಡಮಾನವಿಟ್ಟು 1.25 ಲಕ್ಷ ರೂ. ಸಾಲ, ಸ್ವಸಹಾಯ ಸಂಘ ಸಂಸ್ಥೆಗಳಿಂದ 25 ಸಾವಿರ ರೂ. ಸಾಲ ಸೇರಿದಂತೆ 2 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ.

ಮೃತ ರೈತನಿಗೆ ತಾಯಿ, ಪತ್ನಿ, ಓರ್ವ ಪುತ್ರಿ ಇದ್ದಾರೆ.ಮೃತ ರೈತನ ಶವದ ಮರಣೋತ್ತರ ಪರೀಕ್ಷೆಯನ್ನು ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ನಡೆಸಿದ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News