ಮಣಿಪಾಲ: ದೈವದ ಮನೆಗೆ ನುಗ್ಗಿ ಕಳವು
Update: 2022-05-07 21:41 IST
ಮಣಿಪಾಲ : ದೈವದ ಮನೆಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಮೇ 5ರಂದು ರಾತ್ರಿ ವೇಳೆ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ನಡೆದಿದೆ.
ಬ್ರಹ್ಮಗಿರಿಯ ಪ್ರಥ್ವಿರಾಜ ಶೆಟ್ಟಿ ಎಂಬವರ ಕುಟುಂಬದ ಮನೆಯ ಆವರಣ ದಲ್ಲಿರುವ ದೈವದ ಮನೆಯ ಬಾಗಿಲು ಚಿಲಕವನ್ನು ಮುರಿದು ಒಳ ಪ್ರವೇಶಿಸಿದ ಕಳ್ಳರು, 51 ಸಾವಿರ ರೂ. ಮೌಲ್ಯದ ದೈವದ ಪಂಚ ಲೋಹದ ಹಾಗೂ ಹಿತ್ತಾಳೆಯ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಹೊಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.