ರಾಜ್ಯದಲ್ಲಿ ರವಿವಾರ 112 ಮಂದಿಗೆ ಕೊರೋನ ದೃಢ; ಓರ್ವ ಮೃತ್ಯು

Update: 2022-05-08 15:41 GMT

ಬೆಂಗಳೂರು, ಮೇ 8: ರಾಜ್ಯದಲ್ಲಿ ರವಿವಾರ 112 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಸಾವನ್ನಪ್ಪಿದ್ದು, 92 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,48,747ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,062ಕ್ಕೆ ತಲುಪಿದೆ.  ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,964ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 112 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಂಗಳೂರು ನಗರ 89, ಚಿತ್ರದುರ್ಗ 1, ದಕ್ಷಿಣ ಕನ್ನಡ 5, ಕಲಬುರಗಿ 1, ಮೈಸೂರು 13, ತುಮಕೂರು  ಜಿಲ್ಲೆಯಲ್ಲಿ ಎರಡು ಪ್ರಕರಣ ಪತ್ತೆಯಾಗಿವೆ. ಒಬ್ಬರ ಸಾವು: ಬಳ್ಳಾರಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ರಾಜಧಾನಿಯಲ್ಲಿ 89 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 89 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,65,784  ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,84,586  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News