×
Ad

ಬೆಂಗಳೂರು: ಮೆಟ್ರೋ ಕಂಬಕ್ಕೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ನಾಲ್ವರಿಗೆ ಗಂಭೀರ ಗಾಯ

Update: 2022-05-09 09:47 IST

ಬೆಂಗಳೂರು:  ಮೆಟ್ರೋ ಕಂಬಕ್ಕೆ ಕೆಎಸ್ಸಾರ್ಟಿಸಿ ಬಸ್​​ ಒಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಗರದ ಕೆಂಗೇರಿ ಬಳಿ ನಡೆದಿದೆ.

ಮಡಿಕೇರಿಯಿಂದ ಬೆಂಗಳೂರಿಗೆ ಕಡೆ ಬರುತ್ತಿದ್ದಾಗ ರಾತ್ರಿ 1.30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ 25 ಜನರಿಗೆ ಗಾಯವಾಗಿದೆ. ಬಸ್​ನಲ್ಲಿ ಒಟ್ಟು 45 ಮಂದಿ ಪ್ರಯಾಣ ಮಾಡುತ್ತಿದ್ದು,  ಸದ್ಯ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಘಟನಾ ಸ್ಥಳಕ್ಕೆ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News