ಧರ್ಮಸ್ಥಳ; ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ

Update: 2022-05-11 08:28 GMT

ಬೆಳ್ತಂಗಡಿ :  ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ಇಂದು ಬೆಳಗ್ಗೆ  ಧರ್ಮಸ್ಥಳದಲ್ಲಿ ನಿಧನ ಹೊಂದಿದ್ದಾರೆ.

ಬೆಂಗಳೂರು ಜಿಲ್ಲೆಯ ಯಲಹಂಕ ಮತ್ತು ಬಂಡಿಕೊಡಿಗೆಹಳ್ಳಿಯಲ್ಲಿರುವ ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ‌ ಮಾಲಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ. ನರೇಂದ್ರ ಕುಮಾರ್ (45) ಮೃತರು.

ನಿನ್ನೆ ಬೆಂಗಳೂರಿನಿಂದ ತಮ್ಮ ಶಾಲೆಯ ಶಿಕ್ಷಕಿಯರನ್ನು ಪುತ್ತೂರು ವಿವೇಕಾನಂದ ಕಾಲೇಜಿಗೆ ತರಬೇತಿಗಾಗಿ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಸ್ನೇಹಿತರೊಂದಿಗೆ ಟಿಟಿ ವಾಹನಲ್ಲಿ ಬಂದಿದ್ದು ನಂತರ ಶಿಕ್ಷಕಿಯರನ್ನು ಬಿಟ್ಟು ತಮ್ಮ ಪತ್ನಿ‌ ಮಕ್ಕಳು ಸೇರಿ  ಧರ್ಮಸ್ಥಳ ಸನ್ನಿಧಿ ಗೆಸ್ಟ್ ನಲ್ಲಿ ರೂಂ ಮಾಡಿದ್ದರು, ಇಂದು ಬೆಳಗ್ಗೆ ಏಕಾಏಕಿ ಡಾ. ನರೇಂದ್ರ ಕುಮಾರ್ ಗೆ ಎದೆನೋವು ಕಾಣಿಸಿದ್ದು, ಕೂಡಲೇ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆತರುವ ಪ್ರಯತ್ನ ನಡೆಸಿದ್ದು, ನೇತ್ರಾವತಿ ಸಮೀಪ ವಾಹನದಲ್ಲೇ ಹೃದಯಾಘಾತದಿಂದ ನಿಧನರಾದ ಎಂದು ತಿಳಿದುಬಂದಿದೆ.

ಡಾ.ನರೇಂದ್ರ ಕುಮಾರ್ ಅವರ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ತರಲಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಡಾ. ನರೇಂದ್ರ ಕುಮಾರ್ ಅವರ ಪತ್ನಿ ಸಂದರ್ಶಿನಿ ಶ್ರೀ ಜ್ಞಾನಕ್ಷಿ ವಿದ್ಯಾ ಕೇಂದ್ರದಲ್ಲಿ ಪ್ರಾಂಶುಪಾಲರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News