ಶಿವಮೊಗ್ಗ; ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ: ಪ್ರಕರಣ ದಾಖಲು

Update: 2022-05-12 06:05 GMT

ಶಿವಮೊಗ್ಗ: ಅನಾರೋಗ್ಯ ಪೀಡಿತ ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಮಹಿಳೆಯೊಬ್ಬರು ತಮ್ಮ ಪತಿಯನ್ನು ತೀರ್ಥಹಳ್ಳಿ ಪಟ್ಟಣಕ್ಕೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿ ನಂತರ ರಾತ್ರಿ 9ರ ಸುಮಾರಿಗೆ ತಮ್ಮ ಗ್ರಾಮಕ್ಕೆ ವಾಪಾಸಾದ ಸಂದರ್ಭ ದೇವರಗುಡಿ ಗ್ರಾಮದ ನಿವಾಸಿಗಳಾದ ಸಂಪತ್, ಆದರ್ಶ ಮತ್ತು ಇತರ ಇಬ್ಬರು ಏಕಾಏಕಿ ಇವರನ್ನು ಅಡ್ಡಗಟ್ಟಿ ಅನಾರೋಗ್ಯ ಪೀಡಿತ ಪತಿಗೆ ಹಲ್ಲೆ ನಡೆಸಿ ಸಮೀಪವೇ ಇರುವ ರಬ್ಬರ್ ಪ್ಲಾಂಟೇಷನ್‌ಗೆ ಎಳೆದೊಯ್ದು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಲಾಗಿದೆ.

ಮಹಿಳೆ ಕೂಗಿಕೊಂಡಾಗ ಗಾಯಗೊಂಡು ಎಚ್ಚರ ತಪ್ಪಿದ್ದ ಪತಿ ಕೂಡಾ ಎಚ್ಚರಗೊಂಡು ಪತ್ನಿಯೊಂದಿಗೆ ಸಹಾಯಕ್ಕಾಗಿ ಕೂಗಾಡಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಅಲ್ಲಿಂದ ಪರಾರಿಯಾದರು ಎಂದು ದೂರಲಾಗಿದೆ.

ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News