ಮಡಿಕೇರಿ | ಬೈಕ್ ಅಪಘಾತ: ಯೋಧನ ಸ್ಥಿತಿ ಗಂಭೀರ

Update: 2022-05-12 16:04 GMT

ಮಡಿಕೇರಿ ಮೇ 12 : ಬೈಕ್ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರಪೇಟೆ ಪಟ್ಟಣ ಸಮೀಪದ ನಗರೂರುವಿನಲ್ಲಿ ನಡೆದಿದೆ. 

ಐಗೂರು ನಿವಾಸಿ ಸಿ.ಆರ್.ಪಿ.ಎಫ್. ಯೋಧ ಡಾಲು ಅವರ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಇವರನ್ನು ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಗೊಂಡಿರುವ ಮನೋಜ್ ಹಾಗೂ ಆಸಿಫ್ ಎಂಬುವವರಿಗೆ ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.   ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News