ಮಡಿಕೇರಿ: ಮಗಳ ವಿವಾಹ ಮುಗಿದ ಕೆಲವೇ ಹೊತ್ತಿನಲ್ಲಿ ಇಹಲೋಕ ತ್ಯಜಿಸಿದ ಅಪ್ಪ
Update: 2022-05-12 17:02 GMT
ಮಡಿಕೇರಿ ಮೇ 12 : ಮಗಳ ವಿವಾಹ ಮುಗಿಸಿ ಪತಿಯ ಮನೆಗೆ ಕಳುಹಿಸಿದ ಕೆಲವೇ ಹೊತ್ತಿನಲ್ಲಿ ತಂದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರಪೇಟೆ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದಿದೆ.
ಕಿಬ್ಬೆಟ್ಟ ಗ್ರಾಮದ ಕೃಷಿಕ ಚಿನ್ನಪ್ಪ (60) ಮೃತ ವ್ಯಕ್ತಿಯಾಗಿದ್ದು, ಕಲ್ಯಾಣ ಮಂಟಪದಲ್ಲಿ ತಮ್ಮ ದ್ವಿತೀಯ ಪುತ್ರಿಯ ವಿವಾಹ ಸಮಾರಂಭವನ್ನು ಮುಗಿಸಿ ವಧು-ವರರನ್ನು ಗೋಕಾಕ್ಗೆ ಕಳುಹಿಸಿದ ನಂತರ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ತಕ್ಷಣವೇ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.
ಮೃತರು ಪತ್ನಿ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕಿಬ್ಬೆಟ್ಟ ಗ್ರಾಮದಲ್ಲಿ ನಡೆಯಲಿದೆ.