ಬೆಂಗಳೂರು | ಹೆರೋಹಳ್ಳಿ: ಬಿಜೆಪಿ ಮುಖಂಡ ಆತ್ಮಹತ್ಯೆ

Update: 2022-05-13 05:35 GMT

ಬೆಂಗಳೂರು, ಮೇ 13: ಬಿಬಿಎಂಪಿ ಹೆರೋಹಳ್ಳಿ ವಾರ್ಡ್ ಬಿಜೆಪಿ ಮುಖಂಡ, ಬ್ಯಾಡರಹಳ್ಳಿ ನಿವಾಸಿ ಅನಂತರಾಜ್ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಹಲವು ವರ್ಷಗಳಿಂದ ಥೈರಾಯಿಡ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಹಲವು ಬಾರಿ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಕಳೆದ ರಾತ್ರಿ 7.30ರ ವೇಳೆಗೆ ಮನೆಯಲ್ಲಿ ಫ್ಯಾನಿಗೆ‌‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಮನೆಯವರು ನೀಡಿದ ಮಾಹಿತಿ‌‌ ಮೇರೆಗೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News