ಮೇ 18ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಬಸವರಾಜ ಹೊರಟ್ಟಿ

Update: 2022-05-13 15:03 GMT

ಧಾರವಾಡ, ಮೇ 13: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರು, ಮೇ 18ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. 

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಷತ್‍ನ ಚುನಾವಣಾ ವೇಳಾಪಟ್ಟಿ ಪ್ರಕಟವಾಗದ ಕಾರಣ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ನಿನ್ನೆ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಮೇ 18ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ' ಎಂದು ಮಾಹಿತಿ ನೀಡಿದರು.

ಪರಿಷತ್ ಚುನಾವಣೆಯಲ್ಲಿ ಮೋಹನ್ ಲಿಂಬಿಕಾಯಿ ಬಿಜೆಪಿ ಅಭ್ಯರ್ಥಿಯಾಗಿರುವ ವಿಚಾರ ನನಗೆ ಗೊತ್ತಿಲ್ಲ. ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈ ಕುರಿತು ಮಾತನಾಡುತ್ತೇನೆ' ಎಂದು ಅವರು ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News