ಮೀನು ಹಿಡಿಯುತ್ತಿದ್ದ ವ್ಯಕ್ತಿ ಹೊಳೆಗೆ ಬಿದ್ದು ಮೃತ್ಯು

Update: 2022-05-13 16:02 GMT

ಹೆಬ್ರಿ : ಬಲೆ ಹಾಕಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಮೇ ೧೨ರಂದು ಸಂಜೆ ವೇಳೆ ವರಂಗ ಗ್ರಾಮದ ಬೈದಡಪು ಎಂಬಲ್ಲಿ ನಡೆದಿದೆ.

ಮೃತರನ್ನು ವರಂಗ ಬೈದಡಪು  ನಿವಾಸಿ ಶ್ರೀಧರ ಪೂಜಾರಿ(೬೯) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಹೊಳೆಯ ದಡದಲ್ಲಿ ನಿಂತು  ಬಲೆಯನ್ನು ಹಾಕಿ ಮೀನು ಹಿಡಿಯುತ್ತಿದ್ದು, ಈ ವೇಳೆ ಅವರು ಆಕಸ್ಮಿಕ ವಾಗಿ ಕಾಲು ಜಾರಿ ಹೊಳೆಯ ನೀರಿಗೆ ಬಿದ್ದರೆನ್ನಲಾಗಿದೆ.

ಆದರೆ ಇವರು ಹೊಳೆಯ ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲು ಆಗದೇ ಅಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News