ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Update: 2022-05-14 05:46 GMT

ಉಡುಪಿ, ಮೇ 14: ಉಡುಪಿ ಜಿಲ್ಲಾ ಪ್ರವಾಸಕ್ಕೆ ಆಗಮಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.

 ದೇವರ ದರ್ಶನ ಪಡೆದ ಸಚಿವೆ, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಪರ್ಯಾಯ ಮಠದ ದಿವಾನ ವರದರಾಜ ಭಟ್, ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್, ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News