ಮೂಡುಬಿದಿರೆ: ನೇಣು ಬಿಗಿದು ಯುವಕ ಆತ್ಮಹತ್ಯೆ

Update: 2022-05-14 10:09 GMT

ಮೂಡುಬಿದಿರೆ, ಮೇ 14: ಯುವಕನೋರ್ವ ತನ್ನ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯ ಅರಮನೆ ಬಾಗಿಲು ಬಳಿಯಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ.

ತೋಟದ ಮನೆಯ ನಿವಾಸಿ ರಾಮಚಂದ್ರ ಎಂಬವರ ಪುತ್ರ ಶಿವಪ್ರಸಾದ್ (34) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News