ಬಾಗಲಕೋಟೆ: ವಕೀಲೆ ಮೇಲೆ ಸಾರ್ವಜನಿಕರ ಎದುರಲ್ಲೇ ಹಲ್ಲೆ ನಡೆಸಿದ ವ್ಯಕ್ತಿ

Update: 2022-05-14 16:18 GMT

ಬಾಗಲಕೋಟೆ:  ವಕೀಲೆಯೊಬ್ಬರ ಮೇಲೆ ನಡು ರಸ್ತೆಯಲ್ಲೇ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ನಡೆದಿದೆ. 

ಇಲ್ಲಿನ ವಿನಾಯಕ ನಗರ ಕ್ರಾಸ್​ನಲ್ಲಿ ಹಲ್ಲೆ ನಡೆದಿದ್ದು, ಈ ಸಂಬಂದ ವಿಡಿಯೋ ಒಂದು ವೈರಲ್ ಆಗಿದೆ. 

ಮನೆ ಖಾಲಿ ಮಾಡಿಸುವ ವಿಚಾರದಲ್ಲಿ ಜಗಳ ನಡೆದಿತ್ತು ಎನ್ನಲಾಗಿದೆ. ಬಿಜೆಪಿ ಮುಖಂಡ ರಾಜು ನಾಯ್ಕರ್​ ಮೇಲೆ ವಕೀಲೆ ಸಂಗೀತಾ ಶಿಕ್ಕೇರಿ ದೂರು ದಾಖಲಿಸಿದ್ದರು.  ಈ ಹಿನ್ನೆಲೆಯಲ್ಲಿ ನಾಯ್ಕರ್​​​​ ಬೆಂಬಲಿಗ ಮಹಾಂತೇಶ ಚೊಳಚಗುಡ್ಡ ಹಲ್ಲೆ ಮಾಡಿದ್ದಾನೆ ಎಂದು ವಕೀಲೆ ಆರೋಪಿಸಿದ್ದಾರೆ.

ಪ್ರಕರಣದ ವಿವರ: ಬಾಗಲಕೋಟೆಯ ವಿನಾಯಕ ನಗರದ ಮೂರನೇ ಕ್ರಾಸ್‌ನಲ್ಲಿ ವಕೀಲೆ ಸಂಗೀತ ಶಿಕ್ಕೇರಿರವರ ಮನೆ ಇದ್ದು, ಅವರ ಕುಟುಂಬದವರಲ್ಲಿ ಮನೆಯ ಯಾರಿಗೆ ಸೇರಬೇಕು ಎಂಬ ವಿವಾದ ಉಂಟಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಹೀಗಿರುವಾಗಿ ಇಂದು ಬೆಳಿಗ್ಗೆ ಕೆಲವರು ಜೆಸಿಬಿ ತಂದು ಮನೆ ಕೆಡವಲು ಯತ್ನಿಸಲಾಗಿದೆ. ಆ ಸಂದರ್ಭದಲ್ಲಿ ವಕೀಲೆ ಸಂಗೀತಾ ಶಿಕ್ಕೇರಿಯವರು ಪಕ್ಕದ ಮನೆಯವರ ಜೊತೆ  ಪೊಲೀಸರಿಗೆ ನಮ್ಮ ಮನೆ ತೋರಿಸಿರುವ ಬಗ್ಗೆ ಪ್ರಶ್ನಿಸಿ ಜಗಳ ಆಡಿದ್ದಾರೆ. ಆ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಮಹಾಂತೇಶ್ ಚೋಳದಗುಡ್ಡ ತನ್ನ ಹಾಗೂ ಪತಿಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ವಕೀಲೆ ದೂರಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News