ಬೆಂಗಳೂರಿನಲ್ಲಿ ಬಿಬಿಎಂಪಿಯ ಕಸದ ಲಾರಿಗೆ ಮತ್ತೊಂದು ಬಲಿ

Update: 2022-05-14 15:06 GMT

ಬೆಂಗಳೂರು, ಮೇ 14: ನಗರದಲ್ಲಿ ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿಯ ಸುರಪುರ ಮೂಲದ ದೇವಣ್ಣ(25) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಅಪಘಾತ ನಡೆದಿದ್ದು, ಲಾರಿ ಚಾಲಕ ದಿನೇಶ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 

ಕಳೆದ ಎರಡು ತಿಂಗಳಲ್ಲಿ ಬಿಬಿಎಂಪಿ ಕಸದ ಲಾರಿಗೆ ನಾಲ್ಕನೇ ಬಲಿಯಾಗಿದೆ. ಮಾ.21 ರಂದು ಹೆಬ್ಬಾಳ ಬಸ್ ನಿಲ್ದಾಣದ ಬಳಿ ಕಸದ ಲಾರಿ ಡಿಕ್ಕಿ ಹೊಡೆದು ಅಕ್ಷಯ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಮಾ.31 ರಂದು ಬಾಗಲೂರಿನಲ್ಲಿ ಕಸದ ಲಾರಿ ಡಿಕ್ಕಿ ಹೊಡೆದು ರಾಮಯ್ಯ ಎಂಬ ವೃದ್ಧ ಮೃತಪಟ್ಟಿದ್ದರು. ಇನ್ನು ಎ.18ರಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಕಸದ ಲಾರಿ ಡಿಕ್ಕಿ ಹೊಡೆದು ಪದ್ಮಿನಿ ಎಂಬುವವರು ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News