ಮುಖ್ಯಮಂತ್ರಿ ಸ್ಥಾನಕ್ಕೆ ಲಂಚ ಪ್ರಕರಣದ ಬಗ್ಗೆ ಬಿಜೆಪಿ ಸರಕಾರ ಸ್ಪಷ್ಟನೆ ನೀಡಬೇಕು: ಜನತಾ ಪಾರ್ಟಿ ಆಗ್ರಹ

Update: 2022-05-14 16:26 GMT

ಬೆಂಗಳೂರು, ಮೇ 14: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ 2,500 ಕೋಟಿ ರೂ. ಅನ್ನು ಕೇಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದು, ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜನತಾ ಪಾರ್ಟಿ ಆಗ್ರಹಿಸಿದೆ. 

ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಜನತಾ ಪಾರ್ಟಿ ಅಧ್ಯಕ್ಷೆ ಬಿ.ಟಿ. ಲಲಿತಾನಾಯಕ್ ಮಾತನಾಡಿ, ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಲಂಚ ಕೇಳುತ್ತಾರೆ ಎಂಬ ವಿಷಯದ ಕುರಿತು ಬಿಜೆಪಿ ಸರಕಾರವು ಸ್ಪಷ್ಟನೆ ನೀಡಬೇಕು. ಅಲ್ಲದೆ, ಈ ಕುರಿತು ಲೋಕಾಯುಕ್ತ ಕಚೇರಿಗೆ ದೂರು ಕೊಟ್ಟರೂ, ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಹಾಗಾಗಿ ಸ್ವತಂತ್ರ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್ ಎಸ್., ಡಾ. ಉದಯಶಂಕರ್, ಸಿ. ರಾಜೇಂದ್ರ, ರಮೇಶ್, ಅಬ್ದುಲ್, ಮೋಹನ್, ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News