ಮಂಗಳೂರು; ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

Update: 2022-05-15 15:02 GMT

ಮಂಗಳೂರು : ನಗರದ ಸೆಂಟ್ರಲ್ ರೈಲ್ವೆ ಕಾಲನಿಯ ೨ನೆ ಗೇಟಿನ ಬಳಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಕೇರಳ ಮೂಲದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುಸ್ತಫ ಹಾಗೂ ಜಜಿಲ್ ಎಂದು ಗುರುತಿಸಲಾಗಿದೆ.

ಪಾಂಡೇಶ್ವರ ಠಾಣೆಯ ಎಸ್ಸೈ ಶೀತಲ್ ಅಲಗೂರ್ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದಾಗ ಇಬ್ಬರು ಆರೋಪಿಗಳು ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಬಂಧಿಸಿದ್ದಾರೆ.

ಆರೋಪಿಗಳಿಂದ ೩.೩೭೫ ಕೆ.ಜಿ ಗಾಂಜಾ, 2 ಮೊಬೈಲ್ ಹಾಗೂ ೨,೫೦೦ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ೧,೫೭,೩೦೦ ರೂ. ಎಂದು ಅಂದಾಜಿಸಲಾಗಿದೆ. ಬಂಧಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News