ಬಿಚ್ಚಿದ ಹೊಲಿಗೆ: ಸಿಸೆರಿಯನ್ ಆಗಿದ್ದ ಬಾಣಂತಿಯರ ನರಳಾಟ; ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ಘಟನೆ

Update: 2022-05-15 15:28 GMT

ವಿಜಯಪುರ: ಇಲ್ಲಿನ ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 18 ಬಾಣಂತಿಯರ ಹೊಲಿಗೆ ಬಿಚ್ಚಿಕೊಂಡಿದ್ದು, ಬಾಣಂತಿಯರ ಹೊಲಿಗೆ ಬಿಚ್ಚಿ ನರಳಾಡುತ್ತಿರುವ ಘಟನೆ ನಡೆದಿದೆ.

ಕಳೆದ ಎಪ್ರಿಲ್  1ರಿಂದ 13ರ ವರೆಗೆ ಇಲ್ಲಿ ಸಿಸೆರಿಯನ್ ಮೂಲಕ ಶಸ್ತ್ರ ಚಿಕಿತ್ಸೆ ಮಾಡಿಸಲಾದ ಮಹಿಳೆಯರಿಗೆ ಹೊಲಿಗೆ ಹಾಕಿದ ಜಾಗದಲ್ಲಿ ವಿಪರೀತ ನೋವು ಕಾಣಿಸಿಕೊಂಡು ಪರದಾಡಿದ್ದಾರೆ. ಪರೀಕ್ಷೆ ನಡೆಸಿದಾಗ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಹಾಕಲಾದ ಸ್ಟಿಚ್‌ಗಳು ಬಿಚ್ಚಿದ ಪರಿಣಾಮ ನಂಜು ಉಂಟಾಗಿ ತೊಂದರೆಯಾಗಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇದರಿಂದ ತೊಂದರೆಗೀಡಾಗಿರುವ ಬಾಣಂತಿಯರು ಮತ್ತು ಅವರ ಸಂಬಂಧಿಕರು ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಸಮಸ್ಯೆಯನ್ನು ಆಸ್ಪತ್ರೆಯ ಸಿಬ್ಬಂದಿಯ ಗಮನಕ್ಕೂ ತಂದರೂ ಯಾವುದೇ ಪ್ರಯೋಜನೆವಾಗಿಲ್ಲ. ಇಂದಿಗೆ 9ದಿನಗಳಾದರೂ  ಸರಿಯಾಗಿ ಸ್ಪಂದಿಸುತ್ತಿಲ್ಲ, ಚಿಕಕಿತ್ಸೆ ಕೊಡಿಸಿಲ್ಲ ಎಂದು ಬಾಣಂತಿಯರು ಮತ್ತು ಅವರ ಸಂಬಂಧಿಕರು ಆರೋಪಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News