ಅಪಘಾತ ಪ್ರಕರಣ: ಸಿನೆಮಾ ನಿರ್ಮಾಪಕ ಬಂಧನ

Update: 2022-05-15 16:57 GMT

ಬೆಂಗಳೂರು, ಮೇ 15: ರಸ್ತೆ ದಾಟುವಾಗ ಬೈಕ್ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರಗಾಯಗೊಂಡು ಕನ್ನಡ ಚಿತ್ರರಂಗದ ನಿರ್ಮಾಪಕ ಬಾಲರಾಜ್ ಯಾನೆ ಆನೇಕಲ್ ಬಾಲು(58) ಮೃತಪಟ್ಟಿದ್ದಾರೆ.

ಇಲ್ಲಿನ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಗೌರವ್‍ನಗರದಲ್ಲಿ ಈ ಘಟನೆ ನಡೆದಿದ್ದು, ರವಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ರಸ್ತೆ ದಾಟುವಾಗ ಬೈಕ್‍ನಲ್ಲಿ ವೇಗವಾಗಿ ಬಂದ ವ್ಯಕ್ತಿ ಅವರಿಗೆ ಢಿಕ್ಕಿ ಹೊಡೆದಿದ್ದಾನೆ. 

ಇದರ ರಭಸಕ್ಕೆ ರಭಸಕ್ಕೆ ಬಾಲರಾಜ್ ಅವರು ಕೆಳಗೆ ಬಿದ್ದ ಪರಿಣಾಮ ಕಲ್ಲು ಅವರ ತಲೆಗೆ ಬಡಿದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯರು ಜೆ.ಪಿ.ನಗರದ ಸಾಗರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋಗಿ ಪ್ರೇಮ್ ನಿರ್ದೇಶನದ ನಟ ದರ್ಶನ್ ಅಭಿಯನದ ಕರಿಯಾ ಚಿತ್ರ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಬಾಲರಾಜ್ ಅವರು ಗಣಪ, ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಇ ವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರಾದ ಸಾ.ರಾ.ಗೋವಿಂದು, ಜಯರಾಜ್, ಸುನೀಲ್‍ಪುರಾಣಿಕ್, ನಟ ದರ್ಶನ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News