ದಾವಣಗೆರೆ | ಯುವತಿಗೆ ಮೆಸೇಜ್ ಮಾಡಿದ ಆರೋಪ: ದಲಿತ ಯುವಕನಿಗೆ ಕಂಬಕ್ಕೆ ಕಟ್ಟಿ ಹಲ್ಲೆ; ವಿಡಿಯೋ ವೈರಲ್
Update: 2022-05-16 10:51 GMT
ದಾವಣಗೆರೆ : ಯುವತಿಗೆ ಮೆಸೇಜ್ ಮಾಡುತ್ತಿದ್ದ ಎಂದು ಆರೋಪಿಸಿ ದಲಿತ ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ತಂಡವೊಂದು ಮನಬಂದಂತೆ ಹಲ್ಲೆ ನಡೆಸಿರುವುದು ದಾವಣಗೆರೆಯ ಅತ್ತಿಗೆರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ.
ಹಲ್ಲೆಯಿಂದ ತೀವ್ರಗಾಯಗೊಂಡ ಯುವಕ ಗಣೇಶ್ (20) ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಪ್ರಕರಣಕ್ಕೆ ಸಂಬಂಧಿಸಿ ಇದೀಗ ಕಾರ್ತಿಕ್ ಎಂಬವನನ್ನು ಮಾಯಕೊಂಡ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಎರಡು ದಿನಗಳು ಕಲ್ಯಾಣ ಮಂಟಪವೊಂದರಲ್ಲಿ ಕೂಡಿ ಹಾಕಿ ಗುಂಪೊಂದು ಚಿತ್ರ ಹಿಂಸೆ ನೀಡಿದೆ ಎಂದು ಆರೋಪಿಸಲಾಗಿದೆ.
'ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಓರ್ವನನ್ನು ಬಂಧಿಸಲಾಗಿದೆ. ಇಡೀ ಪ್ರಕರಣ ಡಿ ವೈಎಸ್ ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ' ಎಂದು ಮಾಯಕೊಂಡ ಪೊಲೀಸ್ ಠಾಣೆಯ ಪಿಎಸ್ ಐ ತಿಳಿಸಿದರು.