ಕೊಂಬೆಟ್ಟು: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

Update: 2022-05-16 09:02 GMT

ಪುತ್ತೂರು: ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ  ಶಾಲಾ ಪ್ರಾರಂಭೋತ್ಸವ ಅಂಗವಾಗಿ ಸೋಮವಾರ ಮಕ್ಕಳಿಗೆ ಆರತಿ ಬೆಳಗಿಸಿ, ತಿಲಕ ಇಟ್ಟು, ಹೂ ನೀಡಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಪ್ರೀತಿ ಸಂಭ್ರಮದ ಮೂಲಕ ಸ್ವಾಗತಿಸಲಾಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸದಸ್ಯ ಪಿ.ಜಿ ಜಗನ್ನಿವಾಸ ರಾವ್ ಅವರು ವಿದ್ಯಾರ್ಥಿಗಳಿಗೆ ಹೂ ಮತ್ತು ಚಾಕಲೇಟು ನೀಡಿ ಶಾಲೆಗೆ ಬರಮಾಡಿಕೊಂಡರು.

ಬಳಿಕ ಶಾಲಾ ಮೈದಾನದಲ್ಲಿ ಮಳೆ ಬಿಲ್ಲು 14 ದಿನದ ವಿವಿಧ ಚಟುವಟಿಕೆ ಕಾರ್ಯಕ್ರಮದ ಪ್ರದರ್ಶನವನ್ನು ಶಾಸಕರು ವೀಕ್ಷಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕ ಪುಸ್ತಕ ವಿತರಣೆ ಮಾಡಿದರು. 

ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಲೋಕೇಶ್, ಶಿಕ್ಷಣ ಸಮನ್ವಯಾಧಿಕಾರಿ ಹರಿಪ್ರಸಾದ್, ಬಿಆರ್ ಸಿಯ ಶೋಭ, ಅಕ್ಷರದಾಸೋಹದ ಸಹಾಯಕ ನಿರ್ದೇಶಕ ಸುರೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಶಾಲಾ ಉಪ ಪ್ರಾಂಶುಪಾಲ ವಸಂತ್ ಮೂಲ್ಯ, ಹಿರಿಯ ಶಿಕ್ಷಕಿ ಗೀತಾಮಣಿ, ಅರುಣಾ ಸೇರಿದಂತೆ ಎಸ್ ಡಿಎಂಸಿ ಸದಸ್ಯ ಸುರೇಶ್ ರೈ ಪಡ್ಡಂಬೈಲು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News