ವೈಶಾಖ ಬುದ್ಧ ಪೂರ್ಣಿಮೆ-2022 ಕಾರ್ಯಕ್ರಮ

Update: 2022-05-16 14:08 GMT

ಉಡುಪಿ : ಉಡುಪಿ ಜಿಲ್ಲಾ ದಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ವತಿಯಿಂದ ವೈಶಾಖ ಬುದ್ಧ ಪೂರ್ಣಿಮೆ- ೨೦೨೨ ಕಾರ್ಯಕ್ರಮ ವನ್ನು ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬುದ್ಧಿಸ್ಟ್ ಸೊಸೈಟಿಯ ಉಡುಪಿ ಜಿಲ್ಲಾಧ್ಯಕ್ಷ ರಾಘವೇಂದ್ರ ಜಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪುಸ್ತಕ ವಿತರಣೆ ಮತ್ತು ಬಹು ಮಾನ ವಿತರಣೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಬ್ರಹ್ಮಾವರ ತಹಶೀಲ್ದಾರ್ ರಾಜ ಶೇಖರ್ ಮೂರ್ತಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಕ್ತ ಮಾರ್ಕಾಂಡೇಯ ಮುಖ್ಯ ಅತಿಥಿಗಳಾಗಿದ್ದರು. ಸಂಬುಧ್ಧ ಎಜುಕೇಶನಲ್ ಕಲ್ಚರಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಗೋಪಾಲಕೃಷ್ಣ, ಬುದ್ಧಿಸ್ಟ್ ಸೊಸೈಟಿಯ ಉಡುಪಿ ಜಿಲ್ಲೆಯ ಟ್ರಸ್ಟಿ ಕುಶಲ ರವೀಂದ್ರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News