ಮಂಗಳೂರು-ವಿಟ್ಲ ರಸ್ತೆ ಜಾಲಾವೃತ; ಸಂಚಾರ ಅಸ್ತವ್ಯಸ್ತ

Update: 2022-05-16 14:21 GMT

ಬಂಟ್ವಾಳ : ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ವಿಟ್ಲ - ಮಂಗಳೂರು ರಸ್ತೆಯ ಬೊಬ್ಬೆಕೇರಿ ಹೆದ್ದಾರಿಯಲ್ಲಿ ನೀರು ತುಂಬಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ವಿಟ್ಲ - ಮಂಗಳೂರು ರಸ್ತೆಯಲ್ಲಿ ಖಾಸಗಿ ವ್ಯಕ್ತಿಗಳು ಕಾಮಗಾರಿ ನಡೆಸಿದ್ದರಿಂದ ಚರಂಡಿಗಳಲ್ಲಿ ಹೂಳು ತುಂಬಿದ್ದು ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ನೀರು ಹರಿಯದೆ ಮಳೆ ನೀರಿನಿಂದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ.

ಕಾರು, ಆಟೋ ರಿಕ್ಷಾಗಳ ಒಳಗೆ ನುಗ್ಗುವಷ್ಟು ನೀರು ರಸ್ತೆಯಲ್ಲಿ ತುಂಬಿತ್ತು. ಕೆಲವು ಹೊತ್ತು ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.

ವಿಟ್ಲ ಪಟ್ಟಣ ಪಂಚಾಯತ್ ಮಳೆಗಾಲಕ್ಕೆ ಯಾವುದೇ ಪೂರ್ವ ತಯಾರಿ ನಡೆಸದ ಕಾರಣ ಈ ರೀತಿಯ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸ್ಥಳೀಯರು ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News