ಹುಬ್ಬಳ್ಳಿ ದಾಂಧಲೆ ಪ್ರಕರಣ: 7 ಮಂದಿ ಆರೋಪಿಗಳಿಗೆ ಜಾಮೀನು

Update: 2022-05-16 15:12 GMT

ಹುಬ್ಬಳ್ಳಿ, ಮೇ 16: ತಿಂಗಳ ಹಿಂದೆ ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ 156 ಆರೋಪಿಗಳಲ್ಲಿ ಏಳು ಮಂದಿಗೆ ಕೋರ್ಟ್  ಜಾಮೀನು ಮಂಜೂರು ಮಾಡಿದೆ. 

ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ 5ನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಜಾಮೀನಿಗೆ 148 ಮಂದಿಯಿಂದ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪಿಯುಸಿ, ಪದವಿ ಶೈಕ್ಷಣಿಕ ಹಿನ್ನೆಲೆಯಲ್ಲಿ ಆರು ಮಂದಿಗೆ ಹಾಗೂ ವೈದ್ಯಕೀಯ ಶಿಕ್ಷಣದ ಹಿನ್ನೆಲೆಯಲ್ಲಿ ಒಬ್ಬರಿಗೆ ಜಾಮೀನು ನೀಡಿದೆ ಎಂದು ಆರೋಪಿ ಪರ ವಾದ ಮಂಡಿಸಿದ್ದ ವಕೀಲ ಬಿ.ಆರ್. ಮಹ್ಮದನವರ್ ತಿಳಿಸಿದರು.

ಜಾಮೀನು ಮೇಲೆ ಬಿಡುಗಡೆಯಾದವರು ಬಳ್ಳಾರಿ, ಮೈಸೂರು, ಕಲಬುರಗಿ ಮತ್ತು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇದ್ದರು. 

ಎ.16ರ ರಾತ್ರಿ ಹಳೇ ಹುಬ್ಬಳ್ಳಿ ನಡೆದ ಗಲಭೆ ದಿನದಿಂದ ಪೊಲೀಸರ ಎಂಟು ತಂಡಗಳು ತೀವ್ರ ಕಾರ್ಯಾಚರಣೆ ನಡೆಸಿದ್ದವು. ಹೀಗಾಗಿ ನಿತ್ಯವೂ 10-14 ಜನ ಗಲಭೆಕೋರರನ್ನು ತಂಡಗಳು ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News