ಸಾಗರ: ಕೆರೆಯಲ್ಲಿ ಬಾಲಕಿಯ ಮೃತದೇಹ ಪತ್ತೆ

Update: 2022-05-17 06:37 GMT

ಸಾಗರ,ಮೇ 17: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಗಣಪತಿ ಕೆರೆಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಮೃತ ಬಾಲಕಿಯಯನ್ನು ಬೆಳಲಮಕ್ಕಿಯ ರಕ್ಷಿತಾ(14) ಎಂದು ಗುರುತಿಸಲಾಗಿದೆ. 

ಸೋಮವಾರ ಎಂದಿನಂತೆ ಶಾಲೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ಮನೆಗೆ ಬಾರದಿದ್ದಾಗ ಪೋಷಕರು ಪೇಟೆ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಬಾಲಕಿ ಶವ ಮಂಗಳವಾರ  ಬೆಳಗ್ಗೆ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಎಎಸ್ಪಿ ರೋಹನ್ ಜಗದೀಶ್ ಸಿಬ್ಬಂದಿಯೊಡನೆ ಭೇಟಿ ನೀಡಿದ್ದಾರೆ.

ಬಾಲಕಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಪವಿಭಾಗೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News