ಗದಗ: ನೀರು ಕುಡಿಯಲು ಹೋದ ಮೂವರು ಬಾಲಕಿಯರು ನೀರುಪಾಲು
Update: 2022-05-17 09:12 GMT
ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ಸೋಮವಾರ ನಡೆದಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಬಾಲಕಿಯರನ್ನು ಅಂಕಿತಾ ಲಮಾಣಿ(13), ಲಕ್ಷ್ಮಣ ಲಮಾಣಿ (10), ಸುನಿತಾ(11) ಎಂದು ಗುರುತಿಸಲಾಗಿದೆ.
ಸೋಮವಾರ ಬಾಲಕಿಯರು ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಓರ್ವ ಬಾಲಕಿ ನೀರು ಪಾಲಾಗಿದ್ದಾಳೆ. ಆಕೆಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ. ಘಟನಾ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಬಾಲಕಿಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.
ಸ್ಥಳಕ್ಕೆ ಮುಂಡರಗಿ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು