ಜಿ. ಟಿ ದೇವೇಗೌಡ ಮನೆಗೆ ಹೆಚ್ ಡಿಕೆ, ನಿಖಿಲ್ ಕುಮಾರಸ್ವಾಮಿ ಭೇಟಿ; ಮೊಮ್ಮಗಳ ನಿಧನಕ್ಕೆ ಸಾಂತ್ವನ

Update: 2022-05-17 18:57 GMT

ಮೈಸೂರು: ಮೊಮ್ಮಗಳು ಗೌರಿಯ ಅಗಲಿಕೆಯ ದುಃಖದಲ್ಲಿರುವ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮೈಸೂರು ತಾಲೂಕಿನ ಗುಂಗ್ರಾಲ್ ಗ್ರಾಮದ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು. 

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಸಾ.ರಾ.ಮಹೇಶ್, ಸಿ‌ಎಸ್. ಪುಟ್ಟರಾಜು, ಶಾಸಕರಾದ ಅಶ್ವಿನ್ ಕುಮಾರ್, ಡಾ‌.ಕೆ‌.ಅನ್ನದಾನಿ, ಕೆ. ಮಹದೇವ್ ಹಾಗೂ ವಿವಿಧ ಸ್ವಾಮೀಜಿಗಳು ಹಾಜರಿದ್ದರು.

ಮೊನ್ನೆ ನಿಧನ ಹೊಂದಿದ ಜಿ.ಟಿ.ದೇವೇಗೌಡರ ಮೊಮ್ಮಗಳ ಸಾವಿಗೆ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ  ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಜಿ.ಟಿ.ದೇವೇಗೌಡ ಹಾಗೂ ಅವರ ಪುತ್ರ ಜಿ.ಡಿ.ಹರೀಶ್  ಅವರಿಗೆ  ಸಾಂತ್ವನ ಹೇಳಿ ಧೈರ್ಯ ತುಂಬಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News