ಬೆಂಗಳೂರು | ಮಳೆ ನೀರು ನುಗ್ಗಿದ ಮನೆಗಳಿಗೆ 25 ಸಾವಿರ ರೂ. ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ

Update: 2022-05-18 09:14 GMT

ಬೆಂಗಳೂರು, ಮೇ 18: ರಾಜಧಾನಿಯಲ್ಲಿ ಕಳೆದ ದಿನ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದರಿಂದ ಸಮಸ್ಯೆಯಾಗಿದೆ. ಹೀಗಾಗಿ ನೀರು ನುಗ್ಗಿರುವ ಮನೆಗಳಿಗೆ ತಲಾ 25 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮಳೆಯಿಂದ ತೊಂದರೆಗೀಡಾಗಿರುವ ಆರ್.ಆರ್.ನಗರದ ಐಡಿಯಲ್ಸ್ ಬಡಾವಣೆಗೆ ಆಗಮಿಸಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ‌ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಬೆಂಗಳೂರಿನಲ್ಲಿ ಮಳೆ ಜಾಸ್ತಿಯಾದಗ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಸುಮಾರು 10ರಿಂದ 15 ಮನೆಗಳಿಗೆ ಮಳೆ ನೀರು ನುಗ್ಗಿದೆ. ಭೌಗೋಳಿಕವಾಗಿ ಈ ಪ್ರದೇಶ ಹಾಗೇ ಇದೆ. ರಾಜಕಾಲುವೆ ನೀರನ್ನು ಹೊರಗಡೆಗೆ ತಿರುಗಿಸುವುದೇ ಇದಕ್ಕೆ ಇರುವ ಪರಿಹಾರ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News