ಹುಚ್ಚು ನಾಯಿ ಕಡಿತ: ಆದಿಉಡುಪಿ ಪರಿಸರದಲ್ಲಿ ಆತಂಕ

Update: 2022-05-18 13:46 GMT
ಸಾಂದರ್ಭಿಕ ಚಿತ್ರ

ಉಡುಪಿ : ಹುಚ್ಚು ನಾಯಿಯೊಂದು ಹಲವು ಮಂದಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಆದಿಉಡುಪಿ ಪರಿಸರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಆದಿಉಡುಪಿ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಹುಚ್ಚು ನಾಯಿ ಭೀಕರತೆಯನ್ನು ಅರಿತ ಸಾಮಾಜಿಕ ಕಾರ್ಯ ಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ, ಅಂಬಲಪಾಡಿ ಕೃಷ್ಣ ಹಾಗೂ ಸ್ಥಳೀಯರು ಹುಚ್ಚು ನಾಯಿಯಿಂದ ಬೇರೆ ಸಾರ್ವಜನಿಕರಿಗೆ ತೊಂದರೆ ಕ್ರಮತೆಗೆದುಕೊಂಡಿದ್ದಾರೆ.

ಈ ಬಗ್ಗೆ ನಗರಸಭಾ ಪೌರಾಯುಕ್ತರಿಗೆ ವಿಶು ಶೆಟ್ಟಿ ಮಾಹಿತಿ ನೀಡಿದ್ದು, ಹುಚ್ಚು ನಾಯಿ ಹಲವು ಬೀದಿ ನಾಯಿ ಗಳಿಗೂ ಕಡಿದಿದ್ದು, ಮುಂದಿನ ದಿನಗಳಲ್ಲಿ ಅನಾಹುತದ ಭೀಕರತೆಯ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ಅಂಬಲಪಾಡಿ ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News