ಯಂತ್ರಚಾಲಿತ ದ್ವಿಚಕ್ರ ವಾಹನ ಸೌಲಭ್ಯ: ಅರ್ಜಿ ಆಹ್ವಾನ

Update: 2022-05-18 16:21 GMT

ಉಡುಪಿ, ಮೇ೧೮: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ, ಶೇ.೭೫ಕ್ಕಿಂತ ಹೆಚ್ಚಿನ ಪ್ರಮಾಣದ ದೈಹಿಕ ವಿಕಲಚೇತನರಾಗಿರುವ ಹಾಗೂ ಸೊಂಟದ ಕೆಳಗೆ ಅಂದರೆ ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡಿರುವ, ಆದರೆ ಎರಡೂ ಕೈಗಳು ಸ್ವಾಧೀನದಲ್ಲಿದ್ದು ಇತರ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ೨ ಲ.ರೂ ಒಳಗಿನ ಆದಾಯ ಪ್ರಮಾಣ ಪತ್ರ ಹೊಂದಿರುವ, ಕನಿಷ್ಠ ೨೦ರಿಂದ ೬೦ ವರ್ಷದೊಳಗಿನ ವಿದ್ಯಾರ್ಥಿ, ಖಾಸಗಿ ಅಥವಾ ಸ್ವ-ಉದ್ಯೋಗದಲ್ಲಿರುವ ವ್ಯಕ್ತಿಗಳಿಂದ ಎಸ್‌ಸಿ ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ ೨೫ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: ೦೮೨೦-೨೫೭೪೮೧೦, ೨೫೭೪೮೧೧ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News