ಮಳೆ ಹಿನ್ನೆಲೆ: ಅಗತ್ಯವಿರುವಲ್ಲಿ ಶಾಲಾ ಹಂತದಲ್ಲೇ ರಜೆ ಸಾರಲು ಉಡುಪಿ ಜಿಲ್ಲಾಧಿಕಾರಿ ಸೂಚನೆ

Update: 2022-05-19 04:24 GMT
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಮೇ 19: ಮಳೆ ಕಾರಣಕ್ಕೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿಲ್ಲ. ಆದರೆ ಅಗತ್ಯ ಇರುವಲ್ಲಿ ಆಯಾ ಶಾಲಾ ಹಂತದಲ್ಲೇ ರಜೆ ಸಾರಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ

ಇಂದು ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಇರುವುದರಿಂದ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News