ಕುಶಾಲನಗರ: ಹಿಜಾಬ್ ಪ್ರಕರಣದಲ್ಲಿ ತರಗತಿಯಿಂದ ಹೊರಗುಳಿದಿದ್ದ ಎಲ್ಲಾ ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ಉತ್ತೀರ್ಣ

Update: 2022-05-19 14:48 GMT

ಸಿದ್ದಾಪುರ (ಕೊಡಗು), ಮೆ.19: ಶಿರವಸ್ತ್ರ ದರಿಸಿ ಶಾಲೆಗ ಬಂದ ಕಾರಣಕ್ಕಾಗಿ ತರಗತಿ ಪ್ರವೇಶ ನಿರಾಕರಿಸಲ್ಪಟ್ಟಿದ್ದ ಹತ್ತನೆ ತರಗತಿಯ ಎಲ್ಲಾ ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ಸೆಸ್ಸೆಲ್ಸಿಯ 18 ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ಧರಿಸಿದ ಕಾರಣಕ್ಕಾಗಿ ಫೆಬ್ರವರಿ 14 ರಿಂದ ಶಾಲಾ ಪ್ರವೇಶ ನಿರಾಕರಿಸಲಾಗಿತ್ತು.

ಗುರುವಾರ ಫಲಿತಾಂಶ ಪ್ರಕಟಗೊಂಡಿದ್ದು, ಎಲ್ಲಾ 18 ವಿದ್ಯಾರ್ಥಿನಿಯರೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News