ಉದ್ಯೋಗಾರ್ಥಿಗಳಿಗೆ ನೇರ ಸಂದರ್ಶನ

Update: 2022-05-20 14:25 GMT

ಉಡುಪಿ : ರಿಲಯನ್ಸ್ ನಿಪೊನ್ ಲೈಫ್ ಇನ್ಸುರೆನ್ಸ್ ಮತ್ತು ಸೊಯ್ಯೋದಯ ಎ ಬ್ಯಾಂಕ್ ಆಫ್ ಸ್ಮಾಯಿಲ್ ಕಂಪೆನಿ ವತಿಯಿಂದ ಮೇ 23ರಂದು ಬೆಳಗ್ಗೆ 9.45ರಿಂದ ಮಣಿಪಾಲ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಎಂಎಸ್ಸಿ, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆ ಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. 

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಮೊ.ನಂ: ೯೯೪೫೮೫೬೬೭೦, ೮೧೦೫೬೧೮೨೯೧ ಮತ್ತು ೮೧೯೭೪೪೦೧೫೫ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News