ಮಂಗಳೂರು: ನೂತನ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Update: 2022-05-20 16:45 GMT
ಸಾಂದರ್ಭಿಕ ಚಿತ್ರ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪು, ಕಸಬ ಬೆಂಗರೆ, ಕೋಡಿಕಲ್, ಶಕ್ತಿನಗರ, ಬೈಕಂಪಾಡಿ ಅಥವಾ ಪಣಂಬೂರು, ಯೆಯ್ಯಾಡಿ, ಪೆರ್ಮನ್ನೂರು ಪ್ರದೇಶಗಳಲ್ಲಿ ನೂತನ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರಕಾರಿ ಸ್ವಾಮ್ಯದ ಸಂಘಗಳಾದ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಂಘ, ವ್ಯವಸಾಯ ಸೇವಾ ಸಹಕಾರಿ ಸಂಘ, ತೋಟಗಾರಿಕಾ ಉತ್ಪಾದಕರ ಸಹಕಾರ ಮಾರ್ಕೆಟಿಂಗ್ ಮತ್ತು ಸಂಸ್ಕರಣೆ ಸಂಘ, ನೋಂದಾಯಿತ ಸಹಕಾರಿ ಸಂಘಗಳು, ನೋಂದಾಯಿತ ಪ್ರಾಥಮಿಕ ಗ್ರಾಹಕರ ಸಹಕಾರಿ ಸಂಘ, ನೋಂದಾಯಿತ ನೇಕಾರರ ಸಹಕಾರಿ ಸಂಘ, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿಧೋದ್ದೇಶ ಸಂಘ, ಅಂಗವಿಕಲರ ಕಲ್ಯಾಣ ಸಹಕಾರಿ ಸಂಘ, ಸಹಕಾರಿ ಸಂಘ, ಸ್ತ್ರೀ ಶಕ್ತಿ ಗುಂಪುಗಳು ಅರ್ಜಿ ಸಲ್ಲಿಸಲು ಅರ್ಹವಾಗಿದೆ.

2022ರ ಜೂ.18ರೊಳಗೆ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ಮಂಗಳೂರು ತಾಲೂಕಿನ ತಹಶಿಲ್ದಾರರ ಕಚೇರಿಗೆ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News